3 ತಿಂಗಳಲ್ಲಿ ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು-  ಸಚಿವ ವಿ ಸೋಮಣ್ಣ

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಸೆ. 26. ರೈಲ್ವೆ ಯೋಜನೆಯ ಕೆಲಸ ಈಗಾಗಲೇ ಆರಂಭವಾಗಿದ್ದು, 2026 ರೊಳಗೆ ಶಿವಮೊಗ್ಗ ಶಿಕಾರಿಪುರ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು.

ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಪರಿಶೀಲಿಸಿ ಮಾತನಾಡಿದ ಅವರು, ಕೋಟೆ ಗಂಗೂರಿನಲ್ಲಿ ಕೋಚಿಂಗ್ ಡಿಪೋ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಮುಂದಿನ ಜೂನ್​​ನಲ್ಲಿ ಈ ಕಾಮಗಾರಿ ಮುಗಿಸುತ್ತೇವೆ ಎಂದರು. ರೈಲ್ವೆ ಇಲಾಖೆಯಲ್ಲಿ ಕಳಪೆ ಕಾಮಗಾರಿ ಸಹಿಸಲ್ಲ. ರೈಲ್ವೆ ಇಲಾಖೆ ಎಂಬುದು ರಕ್ಷಣಾ ಇಲಾಖೆ ಇದ್ದ ಹಾಗೆ. ಇನ್ನು ಎರಡರಿಂದ ಮೂರು ತಿಂಗಳಲ್ಲಿ ವಂದೇ ಭಾರತ್ ರೈಲು ಶಿವಮೊಗ್ಗಕ್ಕೆ ಬರಲಿದೆ ಎಂದು ಅವರು ಹೇಳಿದರು.

Also Read  ಬಜೆಟ್ ಬಳಿಕ ಚಿನ್ನದ ದರ ಕುಸಿತ

 

error: Content is protected !!
Scroll to Top