ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ- ಪತಿ ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com ಸೆ. 27. ಮೂರು ತಿಂಗಳ ಗರ್ಭಿಣಿಯೊರ್ವರು ನೇಣುಬಿಗಿದು ಆತ್ಮಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಯನ್ನು ಕುಂಬಳೆ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.

ಬಂಧಿತ ಆರೋಪಿಯನ್ನು ಕಯ್ಯಾರ್ ಕನ್ನಟಿಪ್ಪಾರೆ ಶಾಂತಿಯೋಡು ನಿವಾಸಿ ಜನಾರ್ಧನ (39) ಎಂದು ಗುರುತಿಸಲಾಗಿದೆ. ಪತ್ನಿ ಮಂಗಳೂರು ವಾಮಂಜೂರು ಪಿಲಿಕುಳದ ವಿಜೇತ ಎಂಬಾಕೆ ಆಗಸ್ಟ್ 18 ರಂದು ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತನಿಖೆಯ ವೇಳೆ ವಿಜೇತ ಆತ್ಮಹತ್ಯೆ ಕುರಿತು ಬರೆದಿಟ್ಟಿದ್ದ ಪತ್ರ ಲಭಿಸಿತ್ತು. ದೈಹಿಕ ಹಾಗೂ ಮಾನಸಿಕ ಕಿರುಕುಳ ದಿಂದ ಆತ್ಮಹತ್ಯೆ ಮಾಡಿ ಕೊಂಡಿರುವುದಾಗಿ ತನಿಖೆಯಿಂದ ಸ್ಪಷ್ಟಗೊಂಡಿತ್ತು. ಸದ್ಯ ಆರೋಪಿಯನ್ನು ಕುಂಬಳೆ ಪೊಲೀಸರು ಪೊಲೀಸರು ಠಾಣೆಗೆ ಕರೆಸಿ ಬಂಧಿಸಿದ್ದಾರೆ. ಬಂಧಿತನನ್ನು ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

error: Content is protected !!

Join the Group

Join WhatsApp Group