ತುಮಕೂರು-ಯಶವಂತಪುರ ಮಧ್ಯೆ ನೂತನ ವೈಮು ರೈಲು ಸೇವೆ:ಕೇಂದ್ರ ಸಚಿವ ವಿ ಸೋಮಣ್ಣ ಚಾಲನೆ

(ನ್ಯೂಸ್ ಕಡಬ) newskadaba.com ತುಮಕೂರು ಸೆ.27: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇಂದು ಶುಕ್ರವಾರ ತುಮಕೂರು-ಯಶವಂತಪುರ ಮೆಮು ರೈಲಿಗೆ ಚಾಲನೆ ನೀಡಿದರು.

ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತುಮಕೂರು-ಯಶವಂತಪುರ ಜೊತೆಗೆ ಬಾಣಸವಾಡಿ-ತುಮಕೂರು ನಡುವೆ ಹೊಸ ಮೆಮು ರೈಲು ಸೇವೆ ಆರಂಭ ಮಾಡುವುದಾಗಿ ಭರವಸೆ ನೀಡಿದರು. ಮೆಮು ರೈಲು ಸಂಚಾರ: ತುಮಕೂರು-ಯಶವಂತಪುರ ನಡುವಿನ ಹೊಸ ಮೆಮು ರೈಲು ಇಂದೇ ಕಾರ್ಯಾರಂಭ ಮಾಡುತ್ತಿದ್ದು, ಭಾನುವಾರ ಹೊರತುಪಡಿಸಿ ವಾರದ ಎಲ್ಲ ದಿನ ಸಂಚರಿಸಲಿದೆ.

error: Content is protected !!

Join the Group

Join WhatsApp Group