ಅರ್ಜುನ್ ಪಾರ್ಥಿವ ಶರೀರಕ್ಕೆ ಜಿಲ್ಲಾಡಳಿತ ವತಿಯಿಂದ ಅಂತಿಮ ನಮನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 27. ಶಿರೂರಿನಲ್ಲಿ ಭೂಕುಸಿತಕ್ಕೆ ಸಿಲುಕಿ ನದಿಪಾಲಾಗಿ ೭೨ ದಿನಗಳ ಬಳಿಕ ಪತ್ತೆಯಾದ ಲಾರಿ ಚಾಲಕ ಅರ್ಜುನ್ ಕೋಝಿಕ್ಕೋಡ್ ಕನ್ನಾಡಿಕ್ಕಾಲ್ ನ ಪಾರ್ಥಿವ ಶರೀರ ಅಂಬ್ಯುಲೆನ್ಸ್ ಮೂಲಕ ಕಾಸರಗೋಡಿಗೆ ತಲಪಿದಾಗ ಅಂತಿಮ ನಮನ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಕೆ . ಇಂಪಾಶೇಖರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ . ಶಿಲ್ಪಾ ಮೊದಲಾದವರು ಪುಷ್ಪ ಚಕ್ರ ಅರ್ಪಿಸಿದರು. ಹೊಸ ಬಸ್ಸು ನಿಲ್ದಾಣ ಪರಿಸರದಲ್ಲಿ ತಡರಾತ್ರಿಯಾದಾರೂ ನೂರಾರು ಮಂದಿ ಅಂತಿಮ ನಮನ ಸಲ್ಲಿಸಿದರು.

 

error: Content is protected !!

Join the Group

Join WhatsApp Group