ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ಸೆ.30 ರಂದು ಸುಪ್ರೀಂನಲ್ಲಿ ವಿಚಾರಣೆ

(ನ್ಯೂಸ್ ಕಡಬ) newskadaba.com ಅಮರಾವತಿ, ಸೆ. 28. ವಿಶ್ವ ಪ್ರಸಿದ್ಧ ತಿರುಪತಿ ದೇವಸ್ಥಾನದ ಪ್ರಸಾದ ಲಡ್ಡುಗಳಲ್ಲಿ ಕಲಬೆರಕೆ ತುಪ್ಪವನ್ನು ಬಳಸಲಾಗಿದೆ ಎಂಬ ಆರೋಪದ ವಿವಾದ ಸುಪ್ರೀಂ ಕೋರ್ಟ್ ತಲುಪಿದೆ. ಸೋಮವಾರ 30ರಂದು ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ.


ಆರೋಪದಿಂದ ರಾಜಕೀಯ ಪಕ್ಷಗಳಲ್ಲಿ ವಿವಾದ ಭುಗಿಲೆದಿದ್ದು, ಆಂಧ್ರ ಪ್ರದೇಶ ಸರ್ಕಾರವು ಸಂಪೂರ್ಣ ವಿಷಯದ ಬಗ್ಗೆ ವಿವರವಾದ ಮತ್ತು ಸಮಗ್ರ ತನಿಖೆ ನಡೆಸಲು ಎಸ್‌ಐಟಿಯನ್ನು ರಚಿಸಿದೆ ಎಂದು ಮುಖ್ಯ ಕಾರ್ಯದರ್ಶಿ ನಿರಭ್ ಕುಮಾರ್ ಪ್ರಸಾದ್ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ..

 

error: Content is protected !!

Join WhatsApp Group

WhatsApp Share