ಸುಳ್ಯ: ಕಾಡಾನೆ ದಾಳಿ- ಅಪಾರ ಪ್ರಮಾಣದ ಕೃಷಿ ನಾಶ

(ನ್ಯೂಸ್ ಕಡಬ) newskadaba.com ಸೆ. 28. ಕಾಡಾನೆ ದಾಳಿಯಿಂದಾಗಿ ಅಪಾರ ಪ್ರಮಾಣದ ಕೃಷಿ ನಾಶವಾದ ಘಟನೆ ಸುಳ್ಯ ತಾಲೂಕಿನ ಅಡ್ಕಬಳೆ ಎಂಬಲ್ಲಿ ಸಂಭವಿಸಿದೆ.

ಅರಂತೋಡು ಗ್ರಾಮದ ಅಡ್ಕಬಳೆ ಪರಿಸರದಲ್ಲಿ ಕೃಷಿಕರ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿವೆ. ಅಪಾರ ಪ್ರಮಾಣದ ಕೃಷಿ ನಾಶಗೊಂಡ ಘಟನೆ ವರದಿಯಾಗಿದೆ. ಕಳೆದ ಕೆಲ ದಿನಗಳ ಹಿಂದೆ ಅರಂಬೂರಿನ ಪರಿವಾರಕಾನದಲ್ಲಿ ಕೃಷಿಕರ ತೋಟಕ್ಕೆ ದಾಳಿ ನಡೆಸಿದ್ದ ಆನೆಗಳು ಇದೀಗ ಅರಂತೋಡು ಪರಿಸರದಲ್ಲಿ ಕೃಷಿಗೆ ಹಾನಿ ಮಾಡಿದೆ. ಅಡ್ಕಬಳೆಯ ಗಂಗಾಧರ ಗೌಡ, ಲೀಲಾವತಿ ಅಡ್ಕಬಳೆ ಅವರ ಕೃಷಿ ತೋಟಕ್ಕೆ ದಾಳಿ ನಡೆಸಿ, ತೆಂಗು, ಅಡಿಕೆ ಹಾಗೂ ಬಾಳೆ ಕೃಷಿ ನಾಶಪಡಿಸಿರುವುದಾಗಿ ತಿಳಿದುಬಂದಿದೆ.

error: Content is protected !!

Join the Group

Join WhatsApp Group