ವೆನ್ಲಾಕ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ವಿಭಾಗಕ್ಕೆ ಶಿಲಾನ್ಯಾಸ ► HLLMRI ವಿಭಾಗದ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.11. ಬೆಂಗಳೂರಿನಲ್ಲಿರುವಂತೆ ಮಂಗಳೂರಿನಲ್ಲಿಯೂ ಮಾಜಿ ಪ್ರಧಾನಿ, ದಿವಂಗತ ಇಂದಿರಾ ಗಾಂಧಿಯವರ ಹೆಸರಿನಲ್ಲಿ ಪ್ರಸ್ತುತ ಇರುವ ಆರ್‌ಎಪಿಸಿಸಿ ಆಸ್ಪತ್ರೆ ಮೇಲ್ದರ್ಜೆಗೇರಲಿದ್ದು, ವೆನ್ಲಾಕ್ ಆಸ್ಪತ್ರೆಯು ಮುಂದಿನ ಎರಡು ವರ್ಷಗಳಲ್ಲಿ ಇನ್ನಷ್ಟು ಹೊಸ ಸೌಲಭ್ಯಗಳೊಂದಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.

ಅವರು ಶನಿವಾರದಂದು ದ.ಕ. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಇವುಗಳ ಸಹಭಾಗಿತ್ವದಲ್ಲಿ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಸೂಪರ್ ಸ್ಪೆಶಾಲಿಟಿ ವೈದ್ಯಕೀಯ ವಿಭಾಗ, ವೆನ್ಲಾಕ್ ಮಕ್ಕಳ ಆರೋಗ್ಯ ಕೇಂದ್ರ, ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಮತ್ತು ವೆನ್ಲಾಕ್ ಜಿಲ್ಲಾ ಸಂಯುಕ್ತ ಆಯುಷ್ ಆಸ್ಪತ್ರೆ ಕಟ್ಟಡಗಳಿಗೆ ಶಿಲಾನ್ಯಾಸ ಹಾಗೂ ಎಚ್‌ಎಲ್‌ಎಲ್‌ಎಂಆರ್‌ಐ ವಿಭಾಗದ ಲೋಕಾರ್ಪಣೆ ಕಾರ್ಯಕ್ರಮ ನೆರವೇರಿಸಿ ಮಾತನಾಡಿ, ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಈಗಾಗಲೇ 3 ಕೋಟಿ ರೂ. ಬಿಡುಗಡೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲಿ ಲೇಡಿಗೋಶನ್ ನೂತನ ಆಸ್ಪತ್ರೆಯು ಉದ್ಘಾಟನೆಗೊಂಡು ಮಹಿಳೆಯರ ಆರೋಗ್ಯ ಸೇವೆಗೆ ಲಭ್ಯವಾಗಲಿದೆ ಎಂದರು. ಮುಖ್ಯ ಅತಿಥಿಯಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಸಚಿವ ಯು.ಟಿ.ಖಾದರ್ ಭಾಗವಹಿಸಿದ್ದರು. ಶಾಸಕ ಜೆ.ಆರ್. ಲೋಬೊ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮೇಯರ್ ಭಾಸ್ಕರ ಮೊಯ್ಲಿ, ಉಪ ಮೇಯರ್ ಮುಹಮ್ಮದ್ ಕೆ., ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಜಿ.ಪಂ. ಸ್ಥಾಯಿ ಸಮಿತಿಯ ಅಧ್ಯಕ್ಷ ಶಾಹುಲ್ ಹಮೀದ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group