’ರಾಷ್ಟ್ರಪಿತ ಗಾಂಧೀಜಿಯವರ 155ನೇ ಜನ್ಮದಿನ’- ಪಾದಯಾತ್ರೆಗೆ ಚಾಲನೆ ನೀಡಿದ ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನ’ದ ಅಂಗವಾಗಿ ಗಾಂಧಿ ಭವನದಿಂದ ವಿಧಾನಸೌಧದ ವರೆಗಿನ ಪಾದಯಾತ್ರೆಗೆ ಚಾಲನೆ ನೀಡಿದರು.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನ’ದ ಅಂಗವಾಗಿ ವಿಧಾನಸೌಧದ ‘ಗಾಂಧೀಜಿ ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಹಾಗೂ ‘ಭಾರತದ ಮಾಜಿ ಪ್ರಧಾನಿಗಳಾದ ದಿವಂಗತ ಲಾಲ್ ಬಹದ್ದೂರ್ ಶಾಸ್ತಿ ಅವರ 120ನೇ ಜನ್ಮದಿನ’ದ ಅಂಗವಾಗಿ ಅವರ ‘ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ’ ಮಾಡಿ ಗೌರವ ಸಲ್ಲಿಸಿದರು.

Also Read  ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ➤ ಮೂವರು ಮೃತ್ಯು ಹಲವರು ಗಂಭೀರ..!

 

error: Content is protected !!
Scroll to Top