ಇಸ್ರೇಲ್ ಮೇಲೆ ಇರಾನ್‌ ಕ್ಷಿಪಣಿ ದಾಳಿ- ಸಂಕಷ್ಟದಲ್ಲಿ ಕನ್ನಡಿಗರು

(ನ್ಯೂಸ್ ಕಡಬ) newskadaba.com ಇಸ್ತಾಂಬುಲ್, ಅ. 02.  ಇಸ್ರೇಲ್ ಮೇಲೆ ಕ್ಷಿಪಣಿಗಳ ಮೂಲಕ ಇರಾನ್‌ ದಾಳಿ ನಡೆಸಿದ ಬೆನ್ನಲ್ಲೇ ವಿಮಾನ ಪ್ರಯಾಣಿಕರಿಗೆ ಸಂಕಷ್ಟ ಎದುರಾಗಿದೆ. ಸ್ವಿಜರ್ಲ್ಯಾಂಡ್ ರಾಜಧಾನಿ ಜ್ಯೂರಿಕ್‌ನಿಂದ ದುಬೈಗೆ ಬಂದು ದುಬೈನಿಂದ ಬೆಂಗಳೂರಿಗೆ ಕನ್ನಡಿಗರು ಬರುತ್ತಿದ್ದರು. ಈ ವೇಳೆ ಇರಾನ್‌ ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.

ಕ್ಷಿಪಣಿ ದಾಳಿಯ ಬೆನ್ನಲ್ಲೇ ವಿಮಾನವನ್ನು ಟರ್ಕಿಯ ಇಸ್ತಾಂಬುಲ್‌ನಲ್ಲಿ ಲ್ಯಾಂಡ್‌ ಮಾಡಲಾಗಿದೆ. ಕ್ಷಿಪಣಿ ದಾಳಿಯಿಂದ ಕರ್ನಾಟಕದ ಪ್ರಯಾಣಿಕರ ಜೊತೆ ಸುಮಾರು 300 ಮಂದಿ ಪ್ರಯಾಣಿಕರು ವಿಮಾನದಲ್ಲಿ ಇದ್ದಾರೆ. ಸದ್ಯ ಇರಾನ್‌ ಮತ್ತು ಇರಾಕ್‌ ವಾಯುಸೀಮೆ ಬಂದ್‌ ಆಗಿದ್ದು ಯಾವುದೇ ವಿಮಾನ ಹಾರಾಟ ನಡೆಸುತ್ತಿಲ್ಲ.

 

error: Content is protected !!

Join the Group

Join WhatsApp Group