ಛತ್ತೀಸ್ಗಢ: ಎನ್ಕೌಂಟರ್ನಲ್ಲಿ ಹತ್ಯೆಯಾದ ನಕ್ಸಲೀಯರ ಸಂಖ್ಯೆ 31ಕ್ಕೆ ಏರಿಕೆ

(ನ್ಯೂಸ್ ಕಡಬ)newskadaba.com ದಾಂತೇವಾಡ, . 05. : ಒಂದು ದಿನದ ಹಿಂದೆ ಭದ್ರತಾ ಸಿಬ್ಬಂದಿಯೊಂದಿಗೆ ಉಗ್ರ ಎನ್‌ಕೌಂಟರ್‌ ನಡೆದ ಛತ್ತೀಸ್‌‍ಗಢದ ಬಸ್ತಾರ್‌ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಮತ್ತೆ ಮೂವರು ನಕ್ಸಲೀಯರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದರೊಂದಿಗೆ ನಿನ್ನೆ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ನಕ್ಸಲೀಯರ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.ಎನ್‌ಕೌಂಟರ್‌ ನಡೆದ ದಟ್ಟ ಅರಣ್ಯದಿಂದ ಇಂದು ಬೆಳಗ್ಗೆ ಇನ್ನೂ ಮೂವರು ನಕ್ಸಲೀಯರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌‍ ಮಹಾನಿರೀಕ್ಷಕ ಸುಂದರರಾಜ್‌ ಪಿಟಿಐಗೆ ತಿಳಿಸಿದರು.

Also Read  ಚಂದ್ರಯಾನ-3 ಯಶಸ್ವಿ - ಇಸ್ರೋ ಅಧ್ಯಕ್ಷರಿಗೆ ವಿಶ್ವ ಬಾಹ್ಯಾಕಾಶ ಪ್ರಶಸ್ತಿ

error: Content is protected !!
Scroll to Top