ಪೋಕ್ಸೋ ಪ್ರಕರಣ: ಮುರುಘಾಶ್ರೀಗೆ ಜಾಮೀನು ಮಂಜೂರು ಮಾಡಿದ ಕೋರ್ಟ್

(ನ್ಯೂಸ್ ಕಡಬ)newskadaba.com,ಚಿತ್ರದುರ್ಗ ಅ. 07. ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾಶ್ರೀ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುರುಘಾಶ್ರೀಗೆ ಕೋರ್ಟ್ ಜಾಮೀನು ನೀಡಿದೆ.

ಈ ಹಿಂದೆ ಮುರುಘಾಶ್ರೀಗೆ ಹೈಕೋರ್ಟ್ ಜಾಮೀನು ನೀಡಿತ್ತು. ಹೈಕೋರ್ಟ್ ಮುರುಘಾಶ್ರೀಗೆ ಮಂಜೂರು ಮಾಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಲಾಗಿತ್ತು. ಆರೋಪಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ರದ್ದುಗೊಳಿಸಬೇಕೆಂದು ಮನವಿ ಮಾಡಲಾಗಿತ್ತು.ಈ ಅರ್ಜಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸಬೇಕು. ಅಷ್ಟೇ ಅಲ್ಲದೇ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸುವವರೆಗೆ ಬಂಧನದಲ್ಲಿಡುವಂತೆ ಆದೇಶ ಹೊರಡಿಸಿತ್ತು. ಇದೀಗ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆ ಕೋರ್ಟ್ ಇಂದೇ ಮುರುಘಾಶ್ರೀ ಅವರನ್ನು ಬಿಡುಗಡೆಗೊಳಿಸುವಂತೆ ಆದೇಶಿಸಿದೆ.

Also Read  ಉಪ್ಪಿನಂಗಡಿ: ಟಿಪ್ಪರ್ ಹಾಗೂ ಬೈಕ್ ನಡುವೆ ಢಿಕ್ಕಿ ➤‌ ಸವಾರ ಸ್ಥಳದಲ್ಲೇ ಮೃತ್ಯು

 

error: Content is protected !!
Scroll to Top