ಕುಮಾರಪರ್ವತ ಚಾರಣ ಕೈಗೊಂಡ ಮೊದಲ ತಂಡ

(ನ್ಯೂಸ್ ಕಡಬ)newskadaba.com,. 09.: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತ ಚಾರಣಕ್ಕೆ ಇದೀಗ ಅರಣ್ಯ ಇಲಾಖೆಯ ಹೊಸ ಮಾರ್ಗ ಸೂಚಿಯೊಂದಿಗೆ ಅವಕಾಶ ನೀಡಲಾಗಿದೆ. ಚಾರಣಿಗರು ಆನ್‌ಲೈನ್‌ ಮೂಲಕ ಬುಕ್‌ ಮಾಡಿದ್ದು, ಮಂಗಳವಾರ ಚಾರಣ ಆರಂಭಿಸಿದ್ದಾರೆ. ಆನ್‌ಲೈನ್‌ ಮೂಲಕ ನೋಂದಾಯಿಸಿದ ಮೊದಲ ತಂಡ ನಿನ್ನೆ ಚಾರಣ ಕೈಗೊಂಡಿದೆ. ಹೊಸ ಮಾರ್ಗಸೂಚಿ ಜಾರಿಯಾದ ಬಳಿಕ ಚಾರಣಿಗರು ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆ ಮೂಲಕ ಚಾರಣ ಕೈಗೊಂಡಿದ್ದಾರೆ.

ಕಳೆದ ವರ್ಷದವರೆಗೆ ಕುಮಾರಪರ್ವತ ಚಾರಣ ಸುಲಭವಾಗಿತ್ತು. ಕೆಲ ಕಠಿಣ ನಿಯಮಗಳೊಂದಿಗೆ ನೇರವಾಗಿ ಚಾರಣ ಆರಂಭಿಸಬಹುದಿತ್ತು. ಮಧ್ಯೆ ಮಧ್ಯೆ ತಂಗಲು ಅವಕಾಶವಿತ್ತು. ಆದರೆ ಈ ಬಾರಿ ಚಾರಣದ ನಡುವೆ ತಂಗಲು ನಿರ್ಬಂಧ ಹೇರಲಾಗಿದ್ದು, ಚಾರಣಿಗರು ಒಂದೇ ದಿನದಲ್ಲಿ ಚಾರಣ ಮುಗಿಸಬೇಕಾದ ಅನಿವಾರ್ಯತೆಯಿದೆ.

Also Read  ಕುಮಾರ ಪರ್ವತ ಚಾರಣಕ್ಕೆ ನಾಳೆಯಿಂದ ಆನ್ಲೈನ್ ಟಿಕೆಟ್ ಗೆ ಚಾಲನೆ

error: Content is protected !!
Scroll to Top