ಹಳಸಿದ ಅನ್ನ ತಿಂದು ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com,. 09 ಬೆಂಗಳೂರು: ಹಳಸಿದ ಆಹಾರ ಸೇವಿಸಿ 5 ವರ್ಷದ ಬಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂದಿಸಿದಂತೆ ಕೆಪಿ ಅಗ್ರಹಾರ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದೇ ಆಹಾರ ಸೇವಿಸಿದ ಬಾಲಕನ ಪೋಷಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಮೂವರಿಗೂ ಪದೇ ಪದೇ ವಾಂತಿ ಮತ್ತು ಬೇಧಿ ಕಾಣಿಸಿಕೊಂಡಿದೆ. ಮೂವರು ಆಸ್ಪತ್ರೆಗೆ ದಾಖಲಾದ ಬಳಿಕ ವೈದ್ಯರು ಬಾಲಕ ಧೀರಜ್ (5) ಮೃತಟ್ಟಿರುವುದಾಗಿ ತಿಳಿಸಿದ್ದಾರೆ.

Also Read  ಮಹಾರಾಷ್ಟ್ರದ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಇಂದು ಪ್ರಮಾಣ ವಚನ ಸ್ವೀಕಾರ

error: Content is protected !!
Scroll to Top