ಮೊಬೈಲ್ ಕಿತ್ತುಕೊಂಡ ಕಾರಣಕ್ಕೆ ನಾಪತ್ತೆಯಾದ ಪಿಯುಸಿ ವಿದ್ಯಾರ್ಥಿ – ದೂರು ದಾಖಲು

(ನ್ಯೂಸ್ ಕಡಬ) newskadaba.com ಅ. 11. ಮನೆಮಂದಿ ಮೊಬೈಲ್ ಕಿತ್ತುಕೊಂಡರು ಎಂಬ ಕಾರಣಕ್ಕೆ ಪಿಯುಸಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದವನನ್ನು ವಾಮಂಜೂರು ಸೈಂಟ್ ರೈಮಂಡ್ ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮೇಗಿನಪೇಟೆ ನಿವಾಸಿ ಮುಹಮ್ಮದ್ ಯಾಸೀನ್ ಅಫ್ನಾನ್ (16) ಎಂದು ಗುರುತಿಸಲಾಗಿದೆ. ನಿರಂತರವಾಗಿ ಮೊಬೈಲ್ ನೋಡುವ ಚಟ ಹೊಂದಿದ್ದ ಈತ, ಸೆ.25ರಂದು ಮನೆಯಲ್ಲಿದ್ದ ವೇಳೆ ಅವನ ಬಳಿಯಿಂದ ಮೊಬೈಲ್‌ ನ್ನು ಮನೆಯವರು ಕಿತ್ತುಕೊಂಡಿದ್ದರು. ಬಳಿಕ ಕಾಲೇಜಿಗೆ ಹೋಗಿ ಬರುತ್ತೇನೆಂದು ಹೇಳಿ ಮನೆಯಿಂದ ಹೊರ ಹೋಗಿದ್ದ ಅಫ್ನಾನ್, ಅತ್ತ ಕಾಲೇಜಿಗೂ ಹೋಗದೆ ಮನೆಗೂ ಬಾರದೆ ನಾಪತ್ತೆಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

error: Content is protected !!

Join the Group

Join WhatsApp Group