ಡಿವೈಡರ್ ಗೆ ಬೈಕ್ ಢಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು

Accident

(ನ್ಯೂಸ್ ಕಡಬ) newskadaba.com ಅ. 11. ಡಿವೈಡರ್‌ಗೆ ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ನಡೆದಿದೆ. ಮೃತ ಸವಾರನನ್ನು ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌ (30) ಎಂದು ಗುರುತಿಸಲಾಗಿದೆ.

ಸುಧೀಶ್‌ ಅವರು ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಸುಧೀಶ್ ಅವರ ತಲೆಗೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದಲ್ಲಿ ಡಿವೈಡರ್‌ನ ಎರಡು ವಿದ್ಯುದ್ದೀಪಕ್ಕೆ ಹಾನಿಯುಂಟಾಗಿದೆ ಎಂದು ತಿಳಿದು ಬಂದಿದೆ.

error: Content is protected !!

Join the Group

Join WhatsApp Group