ಕಾಳಿ ದೇವಿಗೆ ಮೋದಿ ನೀಡಿದ್ದ ಕಿರೀಟ ಕದ್ದ ದುಷ್ಕರ್ಮಿಗಳು..!

Theft, crime, Robbery

(ನ್ಯೂಸ್ ಕಡಬ) newskadaba.com ಅ. 11. ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಬಾಂಗ್ಲಾದೇಶದ ಸತ್ಖಿರಾದ ಶ್ಯಾಮನಗರದಲ್ಲಿನ ಜೆಶೋರೇಶ್ವರಿ ದೇವಸ್ಥಾನದ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನು ದುಷ್ಕರ್ಮಿಗಳು ಕಳವು ಮಾಡಿರುವ ಕುರಿತು ವರದಿಯಾಗಿದೆ. ಕಳೆದ 2021ರ ಮಾರ್ಚ್ ನಲ್ಲಿ ಬಾಂಗ್ಲಾದೇಶಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾಗ ಈ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದರು.

ದೇವಾಲಯದ ಅರ್ಚಕ ದಿಲೀಪ್ ಮುಖರ್ಜಿ ಅವರು ದಿನದ ಪೂಜೆ ಮಾಡಿ ಹೊರಟ ನಂತರ ಕಳ್ಳತನ ನಡೆದಿದೆ ಎನ್ನಲಾಗಿದೆ. ಕಳ್ಳರನ್ನು ಪತ್ತೆಹಚ್ಚಲು ನಾವು ದೇವಾಲಯದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಶ್ಯಾಮನಗರ ಪೊಲೀಸ್ ಠಾಣೆಯ ಇನ್ಸ್ಪಕ್ಟರ್ ತೈಜುಲ್ ಇಸ್ಲಾಂ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group