ದಸರಾ ಮಹೋತ್ಸವ- ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ

(ನ್ಯೂಸ್ ಕಡಬ) newskadaba.com ಅ. 11. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವಕ್ಕೆ ಅಂತರ್ ರಾಜ್ಯದಿಂದ ಮೈಸೂರು ನಗರಕ್ಕೆ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಜಲಾಶಯ ವೀಕ್ಷಿಸಲು ಆಗಮಿಸುವ ಪ್ರವಾಸಿ ವಾಹನಗಳಿಗೆ ಮಾತ್ರ ಅನ್ವಹಿಸುವಂತೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ನೀಡಿ ಆದೇಶಿಸಿದೆ.

ತೆರಿಗೆ ವಿನಾಯಿತಿಯು ಅ. 04ರಿಂದ ಜಾರಿಗೆ ಬಂದಿದ್ದು, ಅ.12ರವರೆಗೆ ಜಾರಿಯಲ್ಲಿರಲಿದೆ ಎಂದು ಸಾರಿಗೆ ಇಲಾಖೆ ಆದೇಶ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಕರ್ನಾಟಕ ಹೊರತುಪಡಿಸಿ ಇತರೆ ರಾಜ್ಯಗಳಲ್ಲಿ ನೋಂದಾಯಿಸಲ್ಪಟ್ಟ ಮತ್ತು ಆ ರಾಜ್ಯದಲ್ಲಿ ತೆರಿಗೆ ಪಾವತಿಸಿರುವ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯಿತಿಯನ್ನು ರಾಜ್ಯ ಸರ್ಕಾರ ನೀಡಿದೆ.

Scroll to Top