ಟಿ20 ತಂಡದ ಸದಸ್ಯ ಮೊಹಮ್ಮದ್‌ ಸಿರಾಜ್‌ ಡಿಎಸ್‌ಪಿಯಾಗಿ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಹೈದರಾಬಾದ್‌,ಅ. 12.  ಟೀಂ ಇಂಡಿಯಾ ತಂಡದ ವೇಗದ ಬೌಲರ್‌ ಮೊಹಮ್ಮದ್‌ ಸಿರಾಜ್‌ ಅವರು ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರು ಆಗಸ್ಟ್‌ ನಲ್ಲಿ ಕ್ರಿಕೆಟರ್ ಮೊಹಮ್ಮದ್ ಸಿರಾಜ್‌ ಮತ್ತು ಬಾಕ್ಸರ್ ನಿಖಾತ್ ಝರೀನ್ ಅವರು ಕ್ರೀಡೆಯಲ್ಲಿ ಮಾಡಿದ ಅತ್ಯುತ್ತಮ ಸಾಧನೆಯನ್ನು ಪರಿಗಣಿಸಿ ಗ್ರೂಪ್ 1 ದರ್ಜೆಯ ಹುದ್ದೆ ನೀಡುವುದಾಗಿ ಘೋಷಿಸಿದ್ದರು. ಅವರ ಘೋಷಣೆಯ ನಂತರ ತೆಲಂಗಾಣ ಸರ್ಕಾರವು ಸಾರ್ವಜನಿಕ ಸೇವೆಗಳಿಗೆ ನೇಮಕಾತಿಗಳ ನಿಯಂತ್ರಣ ಮತ್ತು ಸಿಬ್ಬಂದಿ -1994 ಕಾಯ್ದೆಯನ್ನು ತಿದ್ದುಪಡಿ ಮಾಡಿತ್ತು. ಸಿರಾಜ್‌ ಅವರು ಟಿ20 ವಿಶ್ವಕಪ್‌ ತಂಡದ ಸದಸ್ಯರಾಗಿದ್ದ ಹಿನ್ನೆಲೆಯಲ್ಲಿ ತೆಲಂಗಾಣ ಸರ್ಕಾರ ಈ ಗೌರವ ನೀಡಿದೆ.

 

error: Content is protected !!

Join the Group

Join WhatsApp Group