ಪ್ರಿಯಕರನೊಂದಿಗೆ ಸೇರಿ ಹೆತ್ತ ಮಕ್ಕಳನ್ನು ಕೊಂದ ಕ್ರೂರಿ ತಾಯಿ..!

Crime

(ನ್ಯೂಸ್ ಕಡಬ) newskadaba.com . 14 . ಪತಿಗೆ ಕೈ ಕೊಟ್ಟು ಪರಾರಿಯಾಗಿದ್ದ ಮಹಿಳೆಯೋರ್ವಳು ಪ್ರಿಯಕರನೊಂದಿಗೆ ಸೇರಿ ತಾನು ಜನ್ಮ ನೀಡಿದ್ದ ಕರುಳ ಕುಡಿಗಳನ್ನೇ ಕೊಲೆ ಮಾಡಿ ಸ್ಮಶಾನದಲ್ಲಿ ಹೂತು ಹಾಕಿರುವ ಘಟನೆ ರಾಮನಗರದ ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಡಿಜೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಟ್ಯಾನರಿ ರಸ್ತೆಯಲ್ಲಿರುವ ಎ.ಕೆ ಕಾಲೋನಿ ನಿವಾಸಿ 24 ವರ್ಷದ ಮಹಿಳೆ ತನ್ನ ಮೂರು ವರ್ಷ ಹಾಗೂ 11 ತಿಂಗಳ ಕರುಳ ಕುಡಿಗಳನ್ನೇ ಬಲಿ ಪಡೆದ ಕ್ರೂರಿ ತಾಯಿ. ಡಿ.ಜೆ ಹಳ್ಳಿಯಲ್ಲಿ ಪತಿಯೊಂದಿಗೆ ವಾಸವಾಗಿದ್ದ ಮಹಿಳೆ ಕೆಲವು ದಿನಗಳ ಹಿಂದೆ ಪತಿಗೆ ಕೈಕೊಟ್ಟು ತನ್ನ ಎರಡು ಮಕ್ಕಳ ಜೊತೆ 27 ವರ್ಷದ ಪ್ರಿಯಕರನೊಂದಿಗೆ ಪರಾರಿಯಾಗಿದ್ದಳು. ಈ ಕುರಿತಂತೆ ಮಹಿಳೆಯ ಪತಿ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪತ್ನಿ -ಮಕ್ಕಳು ಕಾಣೆಯಾಗಿರುವ ಬಗ್ಗೆ ಮಿಸ್ಸಿಂಗ್ ಕಂಪ್ಲೆಂಟ್ ದಾಖಲಿಸಿದ್ದರು. ಅತ್ತ ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಮಹಿಳೆ ರಾಮನಗರದ ಐಜೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಪೇಗೌಡ ಸರ್ಕಲ್ ಸಮೀಪದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸ್ವಲ್ಪ ದಿನ ಮಕ್ಕಳೊಂದಿಗೆ ಚೆನ್ನಾಗಿಯೇ ಇದ್ದ ಮಹಿಳೆ, ತನ್ನ ಪ್ರಿಯಕರನೊಂದಿಗೆ ಶಾಮೀಲಾಗಿ ಏಕಾಏಕಿ ತನ್ನ ಎರಡು ಮಕ್ಕಳನ್ನು ಕೊಲೆ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

error: Content is protected !!

Join WhatsApp Group

WhatsApp Share