ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಸೊಸೈಟಿ ಉದ್ಯೋಗಿ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಅ. 16. ದ್ವಿಚಕ್ರ ವಾಹನಗಳ ನಡುವೆ ನಡೆ ಅಪಘಾತದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ ಮೃತಪಟ್ಟ ಘಟನೆ ಸುಳ್ಯದ ಪೈಚಾರು – ಸೋಣಂಗೇರಿ ರಸ್ತೆಯ ಆರ್ತಾಜೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.

ಮೃತರನ್ನು ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಉದ್ಯೋಗಿ ಭೋಜಪ್ಪ (50) ಎಂದು ಗುರುತಿಸಲಾಗಿದೆ. ಸುಳ್ಯ ಕಡೆಯಿಂದ ಸೋಣಂಗೇರಿ ಕಡೆಗೆ ಸಂಚರಿಸುತ್ತಿದ್ದ ಬುಲೆಟ್ ಹಾಗೂ ಐವರ್ನಾಡಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಸಾಗುತ್ತಿದ್ದ ಭೋಜಪ್ಪ ಅವರ ಹೋಂಡ ಬೈಕ್ ಢಿಕ್ಕಿಯಾಗಿದೆ. ಅಪಘಾತದಿಂದಾಗಿ ಬುಲೆಟ್‌ನಲ್ಲಿದ್ದ ನೆಲ್ಲೂರು ಕೆಮ್ರಾಜೆಯ ಮಂದ್ರಪ್ಪಾಡಿ ಅರುಣ್ ಹಾಗೂ ವಸಂತ ಅವರು ಗಾಯಗೊಂಡಿದ್ದು, ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Also Read  ದಿಡುಪೆ ಕಡಮಗುಂಡಿಯಲ್ಲಿ ಪ್ರವಾಸಿಗರ ದಂಡು ➤ ಕಲುಷಿತಗೊಳ್ಳುತ್ತಿದೆ ಜಲಪಾತದ ನೀರು

 

 

error: Content is protected !!
Scroll to Top