ಮರಕ್ಕೆ ಸ್ಕೂಟರ್ ಢಿಕ್ಕಿ- ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.16. ಸವಾರನ ನಿಯಂತ್ರನ ತಪ್ಪಿದ ಸ್ಕೂಟರ್ ಒಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಮದ್ದೂರಿನ ಶಾರದಾ ನಗರದಲ್ಲಿ ಬುಧವಾರದಂದು ನಡೆದಿದೆ.

ಮೃತರನ್ನು ಮಡೂರು ನಿವಾಸಿ ನಾಗೇಶ್ (51) ಎಂದು ಗುರುತಿಸಲಾಗಿದೆ. ಖಾಸಗಿ ಆಸ್ಪತ್ರೆಯೊಂದರಲ್ಲಿ ಉದ್ಯೋಗಿಯಾಗಿದ್ದ ನಾಗೇಶ್, ರಜೆಯ ಮೇಲೆ ಬೀರಿ ಮಾರುಕಟ್ಟೆಯಿಂದ ತೆಂಗಿನಕಾಯಿ ಖರೀದಿಸಿ ಮನೆಗೆ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆನ್ನಲಾಗಿದೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಠಾಣೆ ಎಎಸ್‌ಐ ಯಶವಂತ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!

Join WhatsApp Group

WhatsApp Share