ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ..!

(ನ್ಯೂಸ್ ಕಡಬ) newskadaba.com  ಕಾಸರಗೋಡು, ಅ. 17. ಎರಡು ವಾರಗಳ ಹಿಂದೆಯಷ್ಟೇ ಕೊಲ್ಲಿ ರಾಷ್ಟ್ರದಿಂದ ಊರಿಗೆ ಮರಳಿದ್ದ ಯುವಕನೊಬ್ಬನ ಮೃತದೇಹ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತಪಟ್ಟ ಯುವಕನನ್ನು ತೂಮಿನಾಡು ಕುಚ್ಚಿಕ್ಕಾಡ್‌ನ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಕೆ.ಎಚ್. ಮುಹಮ್ಮದ್ ಎಂಬವರ ಪುತ್ರ ಮುಹಮ್ಮದ್ ಅನ್ಸಾರ್ (32) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ 11 ರ ಸುಮಾರಿಗೆ ಕೊಠಡಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಮುಹಮ್ಮದ್ ಅನ್ಸಾರ್ ಪತ್ತೆಯಾಗಿದ್ದರೆನ್ನಲಾಗಿದ್ದು, ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವವನ್ನು ರಕ್ಷಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.

Also Read  ಗುರು ಪಟ್ಟಾಭಿಷೇಕಕ್ಕೆ ಒಂದು ತಿಂಗಳು ಇರುವಾಗಲೇ ► ಶಿವಮೊಗ್ಗದಲ್ಲಿ ನೇಣಿಗೆ ಶರಣಾದ ಉಜಿರೆಯ ಕ್ರೈಸ್ತ ಪಾದ್ರಿ!

 

error: Content is protected !!
Scroll to Top