ಉಪಚುನಾವಣೆ ಕಾಂಗ್ರೆಸ್ ಸಮರ್ಥವಾಗಿ ಎದುರಿಸಲಿದೆ – ಸಿಎಂ

(ನ್ಯೂಸ್ ಕಡಬ) newskadaba.com ಅ.17. ಬರುವ ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಅವರು ಇಂದುವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಸಿಬಿಐ, ಇಡಿ, ಐಟಿ ಸೇರಿದಂತೆ ಯಾವುದೇ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕೇ ಹೊರತು ಒಂದು ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡಬಾರದು ಎಂದು ತಿಳಿಸಿದರು.

 

Scroll to Top