ನದಿಗೆ ಉರುಳಿ ಬಿದ್ದ ಕಾರು: ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, . 21. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಗಿಣಾ ನದಿಗೆ ಉರುಳಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಘಟನೆ ಚಿತ್ತಾಪುರ ತಾಲೂಕಿನ ದಂಡೋತಿ ಸಮೀಪದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಚಿತ್ತಾಪುರ ಪಟ್ಟಣದ ಬಹಾರಪೇಟ್ ನಿವಾಸಿ ಕಾರು ಚಾಲಕ ನಿಂಗಪ್ಪ ಪೂಜಾರಿ (50) ಎಂದು ಗುರುತಿಸಲಾಗಿದೆ. ಕೃಷ್ಣಾ ಮತ್ತು ಉಮೇಶ ಎನ್ನುವವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಗಾಯಳುಗಳಿಗೆ ಚಿತ್ತಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಮಾಡಬೂಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

        

error: Content is protected !!

Join the Group

Join WhatsApp Group