ಕಡಬ: ನಿವೃತ್ತ ಎಎಸ್ಐ ಕೃಷ್ಣ ಶೆಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಅ. 22. ಪುತ್ತೂರು ನಗರ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ(70)ರವರು ಇಂದು ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಮೂಲತಃ ಕಡಬ ತಾಲೂಕಿನ ಮರ್ಧಾಳ ಮೂಲದವರಾದ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿದ್ದರು. ಬಳಿಕ ಬೆಂಗಳೂರಿನಲ್ಲಿ ನೆಲೆಸಿದ್ದ ಅವರು ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ ಮಂಜುಳಾ ಶೆಟ್ಟಿ, ಪುತ್ರರಾದ ವಿಜೇಶ್ ಶೆಟ್ಟಿ, ಅರುಣ್ ಶೆಟ್ಟಿ ಮತ್ತು ಪುತ್ರಿ ದೀಪಿಕಾ ಶೆಟ್ಟಿ ಹಾಗೂ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

error: Content is protected !!

Join WhatsApp Group

WhatsApp Share