ರಾಜ್ಯದಲ್ಲಿ 14 ಲಕ್ಷ ಮಂದಿಯ ಪಡಿತರ ಕಾರ್ಡ್​ ರದ್ದು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ರಾಜ್ಯದಲ್ಲಿ ಸುಮಾರು 14 ಲಕ್ಷ ಬಿಪಿಎಲ್‌ ಪಡಿತರ ಕಾರ್ಡ್‌ಗಳು ಅನರ್ಹರ ಪಾಲಾಗಿದ್ದು, ಇವುಗಳನ್ನು ರದ್ದುಪಡಿಸಲಾಗುತ್ತದೆ ಎಂದು ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಅನರ್ಹರೂ ಕೂಡ ಬಿಪಿಎಲ್ ಪಡಿತರ ಕಾರ್ಡ್​ ಹೊಂದಿದ್ದು, ಸರ್ಕಾರದಿಂದ ಬಡವರಿಗೆ ದೊರೆಯುವ ಅನೇಕ ಸವಲತ್ತುಗಳನ್ನು ಪಡೆಯುತ್ತಿರುವುದನ್ನು ಗಮನಿಸಿರುವ ಆಹಾರ ಇಲಾಖೆ ಕಠಿಣ ಕ್ರಮ ಆರಂಭಿಸಿದೆ. ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ ಅನರ್ಹರ ಕಾರ್ಡ್​​ಗಳನ್ನು ರದ್ದುಗೊಳಿಸಲಾಗುತ್ತಿದೆ. ಇದೀಗ ಅಧಿಕಾರಿಗಳು 13.87 ಲಕ್ಷ ಅನರ್ಹ ಕಾರ್ಡ್‌ಗಳನ್ನು ಗುರುತಿಸಿದ್ದು, ಅವುಗಳಲ್ಲಿ 3.64 ಲಕ್ಷ ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ ಎಂದಿದ್ದಾರೆ.

Also Read  7, 8, 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್, ಎಸೆಸೆಲ್ಸಿ ಪರೀಕ್ಷೆ ವೇಳಾಪಟ್ಟಿ ಎ.14ರ ನಂತರ ತೀರ್ಮಾನ: ಸಚಿವ ಸುರೇಶ್ ಕುಮಾರ್

 

 

error: Content is protected !!