ಅಂಪಾರು: ಬೈಕ್‌ ಮರಕ್ಕೆ ಢಿಕ್ಕಿ ► ನಾಲ್ಕೂವರೆ ವರ್ಷದ ಬಾಲಕಿ ಮೃತ್ಯು, ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕುಂದಾಪುರ, ಮಾ.18. ಬೈಕೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ನಾಲ್ಕೂವರೆ ವರ್ಷದ ಬಾಲಕಿ ಮೃತಪಟ್ಟು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಶಂಕರನಾರಾಯಣದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಮೃತ ಬಾಲಕಿಯನ್ನು ಶಂಕರನಾರಾಯಣ ಸಮೀಪದ ಅಂಪಾರು ನಿವಾಸಿ ವಾಸು ಎಂಬವರ ಪುತ್ರಿ ಸಿಂಚನ ಎಂದು ಗುರುತಿಸಲಾಗಿದೆ. ಕೃಷ್ಣ ಎಂಬಾತ ತನ್ನ ಸ್ನೇಹಿತ ವಾಸುರವರ ಪುತ್ರಿಯನ್ನು ಚಿಕಿತ್ಸೆಗಾಗಿ ಬೈಕಿನಲ್ಲಿ ಕುಳ್ಳಿರಿಸಿ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿದೆ. ಘಟನೆಯಲ್ಲಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿರುವ ಕೃಷ್ಣರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ
ಶಂಕರನಾರಾಯಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!

Join the Group

Join WhatsApp Group