ಕಾಡಾನೆ ದಾಳಿ- ಅಪಾರ ಕೃಷಿ ಹಾನಿ..!

(ನ್ಯೂಸ್ ಕಡಬ) newskadaba.com ಅ.23. ಕಾಡಾನೆಗಳ ಹಿಂಡೊಂದು ಕೃಷಿ ಭೂಮಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಮಿತ್ತಬಾಗಿಲು ಗ್ರಾಮದ ಬಾನೊಟ್ಟು ಯೋಗೀಶ್ ಎಂಬವರ ಸೋಲಾರ್ ಬೇಲಿಯನ್ನು ಮುರಿದು ಹಾಕಿರುವ ಕಾಡಾನೆಗಳು ಕೋಡಿ ಶೀನಪ್ಪ ಗೌಡ ಎಂಬವರ ಬಾಳೆ ಗಿಡ ಮತ್ತು ಗದ್ದೆಗಳಿಗೆ ದಾಳಿ ನಡೆಸಿ ಹಾನಿ ಉಂಟು ಮಾಡಿವೆ. ಹಿಂಡಿನಲ್ಲಿ ಎರಡಕ್ಕಿಂತ ಅಧಿಕ ಕಾಡಾನೆಗಳಿರುವ ಶಂಕೆ ವ್ಯಕ್ತವಾಗಿದ್ದು, ಸೋಮವಾರ ರಾತ್ರಿ ಸಮೀಪದ ಮಲವಂತಿಗೆ ಗ್ರಾಮದಲ್ಲಿ 6ಕ್ಕಿಂತ ಅಧಿಕ ಕಾಡಾನೆಗಳು ತೋಟಗಳಿಗೆ ನುಗ್ಗಿ ಹಾನಿ ಉಂಟುಮಾಡಿದ್ದವು.
ಇತ್ತೀಚೆಗೆ ಆನೆಗಳ ಉಪಟಳ ಹೆಚ್ಚಾಗುತ್ತಿದ್ದು, ಕಾಡಾನೆಗಳನ್ನು ಅರಣ್ಯಕ್ಕೆ ಓಡಿಸುವ ಬಗ್ಗೆ ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಜನರು ಒತ್ತಾಯಿಸಿದ್ದಾರೆ.

error: Content is protected !!

Join the Group

Join WhatsApp Group