ಅಬಕಾರಿ ದಾಳಿ- ಕಳ್ಳಬಟ್ಟಿ ಸಾರಾಯಿ ವಶಕ್ಕೆ

crime, arrest, suspected

(ನ್ಯೂಸ್ ಕಡಬ) newskadaba.com ಅ.23. ಮನೆಯೊಂದರ ಮೇಲೆ ದಾಳಿ ನಡೆಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಕಳ್ಳಬಟ್ಟಿ ಸಾರಾಯಿಯನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ಕನ್ಯಾಡಿ ಗ್ರಾಮದ ಗುರಿಪಳ್ಳ ಎಂಬಲ್ಲಿ ನಡೆದಿದೆ.

ದಾಳಿಯ ವೇಳೆ ಪ್ರವೀಣ್ ರೋಡ್ರಿಗಸ್ ಎಂಬಾತ ಮನೆಯಲ್ಲಿ ಅಕ್ರಮವಾಗಿ ತಯಾರಿಸಿ ಪ್ಲಾಸ್ಟಿಕ್‍ ಕ್ಯಾನ್ ನಲ್ಲಿ ಸಂಗ್ರಹಿಸಿಟ್ಟಿದ್ದ 18.75 ಲೀಟರ್ ಕಳ್ಳಬಟ್ಟಿ ಸಾರಾಯಿ ಹಾಗೂ ಕಳ್ಳಬಟ್ಟಿ ತಯಾರಿಸಲು ಪ್ಲಾಸ್ಟಿಕ್ ಡ್ರಮ್ ನಲ್ಲಿ ಶೇಖರಿಸಿ ಇಟ್ಟಿರುವ 37 ಲೀಟರ್ ವಾಶ್ ಅನ್ನು ಮತ್ತು ಕಳ್ಳಬಟ್ಟಿ ತಯಾರಿಸುವ ಪರಿಕರಗಳನ್ನು ಅಧಿಕಾರಿಗಳು ಜಪ್ತಿ ಪಡಿಸಿಕೊಂಡು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Scroll to Top