ಕಂಬಳ ಪ್ರಶ್ನಿಸಿ ಇಂದು ಅರ್ಜಿ ವಿಚಾರಣೆ..!

(ನ್ಯೂಸ್ ಕಡಬ) newskadaba.com ಅ. 23. ನಗರದ ಅರಮನೆ ಮೈದಾನದಲ್ಲಿ ಅಕ್ಟೋಬರ್‌ 26ರಂದು ಬೆಂಗಳೂರು ಕಂಬಳ ಸಮಿತಿ ಆಯೋಜಿಸಲಿರುವ ಕಂಬಳ ಸ್ಪರ್ಧೆಗೆ ಅನುಮತಿ ನೀಡದಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಬುಧವಾರಕ್ಕೆ ಮುಂದೂಡಿದೆ.


ಈ ವಿಚಾರವಾಗಿ ಪೀಪಲ್‌ ಫಾರ್‌ ದಿ ಎಥಿಕಲ್‌ ಟ್ರೀಟ್ಮೆಂಟ್ ಆಫ್ ಎನಿಮಲ್ಸ್ (ಪೆಟಾ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

Scroll to Top