ವಿದ್ಯುತ್ ತಂತಿ ತಗುಲಿ ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಅ. 24. ಜಮೀನಿಗೆ ತೆರಳುವಾಗ ಹಠತ್ತಾಗಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಅಯ್ಯನಪುರ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಚಂದಕವಾಡಿ ಹೋಬಳಿಯ ಅಯ್ಯನಪುರ ಗ್ರಾಮದ ಹೊರ ವಲಯದಲ್ಲಿರುವ ಜಮೀನಿಗೆ ನಾಗೇಂದ್ರ ಮತ್ತು ಮಲ್ಲೇಶ್ ರವರು ಬೈಕ್ ನಲ್ಲಿ ಬುಧವಾರ ರಾತ್ರಿ ತೆರಳುವಾಗ ಹಠತ್ತಾಗಿ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ವಿದ್ಯುತ್ ಹರಿದು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚೆಸ್ಕಾಂ ಸಿಬ್ಬಂದಿಗಳು ಸಹ ಸ್ಥಳಕ್ಕೆ ಆಗಮಿಸಿದ್ದು, ರಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಅಪಘಾತ- ಆರು ಯಾತ್ರಾರ್ಥಿಗಳಿಗೆ ಗಾಯ

 

 

error: Content is protected !!
Scroll to Top