ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ – ಗಾಯಗೊಂಡಿದ್ದ ಮಹಿಳೆ ಮೃತ್ಯು..!

Death, deadbody, Waterfall

(ನ್ಯೂಸ್ ಕಡಬ) newskadaba.com ಅ.25. ವ್ಯಕ್ತಿಯೋರ್ವ ತನ್ನ ತಮ್ಮನ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದಲ್ಲಿ ತೀವ್ರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟ ಕುರಿತು ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದಿಂದ ವರದಿಯಾಗಿದೆ.

ಮೃತಪಟ್ಟವರನ್ನು ಜಯಭಾರತಿ ಎಂದು ಗುರುತಿಸಲಾಗಿದೆ. ಅ.12ರಂದು ರಾತ್ರಿ ಮನೆಯ ಕೋಣೆಯಲ್ಲಿ ಮಲಗಿದ್ದ ಜಯಭಾರತಿ ಎಂಬವರ ಪತಿಯ ಅಣ್ಣ ಶಂಕರ ನಾಯಕ್ ಎಂಬಾತ ಕಿಟಕಿಯ ಮೂಲಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಎನ್ನಲಾಗಿದ್ದು, ಘಟನೆಯಲ್ಲಿ ಇಬ್ಬರೂ ಗಾಯಗೊಂಡಿದ್ದರು. ಶೇ. 80 ರಷ್ಟು ಗಾಯಗೊಂಡಿದ್ದ ಮಹಿಳೆ ಜಯಭಾರತಿ ಎಂಬವರನ್ನು ಸುಳ್ಯ ಆಸ್ಪತ್ರೆಗೆ ತಂದು ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಜಯಭಾರತಿ ಅವರ ಪತಿ ಜನಾರ್ದನ ನಾಯಕ್ ಎಂಬವರು ಒಂದೂವರೆ ವರ್ಷದ ಹಿಂದೆ ನಿಧನರಾಗಿದ್ದರು.

Also Read  ಪೊಲೀಸ್ರರ ಭಾರ ತಾಳಲಾರದೆ ಸ್ಥಳದಲ್ಲೇ ಚಿರತೆ ಸಾವು

ಪ್ಯಾರಾಲಿಸಿಸ್ ಅಟ್ಯಾಕ್ ಆಗಿ ಒಂದು ಕೈ ಮತ್ತು ಒಂದು ಕಾಲಿನ ಸಂಪೂರ್ಣ ಹಿಡಿತ ಕಳೆದುಕೊಂಡಿದ್ದ ಶಂಕರ ನಾಯಕ್‌ಗೆ ಊಟ, ಮದ್ದು ಕೊಡುತ್ತಿದ್ದರೂ ಆರೋಪಿ ಶಂಕರ ನಾಯಕ್ ಜಯಭಾರತಿಯನ್ನು ಯಾವಾಗಲೂ ದ್ವೇಷಿಸುತ್ತಿದ್ದ ಎಂದು ತಿಳಿದುಬಂದಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top