ರಾಜ್ಯ ಸರ್ಕಾರ: ಅರಣ್ಯ ಭೂಮಿ ಸಮೀಕ್ಷೆಗೆ 15 ದಿನಗಳಲ್ಲಿ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com .25, ಬೆಂಗಳೂರು: ಸಚಿವ ಈಶ್ವರ್ ಪರಮೇಶ್ವರ್ ರವರು ರಾಜ್ಯದ ಅಧಿಸೂಚಿತ, ದಾಖಲಿತ ಅರಣ್ಯ ದಾಖಲೀಕರಣ ಮತ್ತು ಪರಿಭಾವಿತ ಅರಣ್ಯ ಭೂಮಿಯ ನ್ಯೂನತೆ ಸರಿಪಡಿಸುವ ಸಂಬಂಧ ತಜ್ಞರ ಸಮಿತಿಯನ್ನು 15 ದಿನಗಳಲ್ಲಿ ರಚನೆ ಮಾಡಲಾಗುವುದು ಎಂದು  ಗುರುವಾರ ಹೇಳಿದರು.

ವನ್ ಸಂರಕ್ಷಣ ಏವಂ ಸಂವರ್ಧನ ಅಧಿನಿಯಮ 1980 ನಿಯಮ 16ರಡಿ ಹೊಸ ತಜ್ಞರ ಸಮಿತಿ ರಚಿಸಲು ಅವಕಾಶವಿದ್ದು, ಈ ಸಮಿತಿ ರಾಜ್ಯದ ಅಧಿಸೂಚಿತ ಮತ್ತು ದಾಖಲಿಸಲಾದ ಅರಣ್ಯ ಪ್ರದೇಶದ ಸಮಗ್ರ ದಾಖಲೀಕರಣ ಮತ್ತು ಪರಿಭಾವಿತ ಅರಣ್ಯ ಪ್ರದೇಶದ ಲೋಪದೋಷ ಸರಿಪಡಿಸಲು ಪರಾಮರ್ಶಿಸಿ 6 ತಿಂಗಳೊಳಗೆ ವರದಿ ಸಲ್ಲಿಸಲಿದೆ ಎಂದು ಹೇಳಿದರು. ಪರಿಭಾವಿತ ಅರಣ್ಯ ಎಂದು ಗುರುತಿಸಿರುವ ಪ್ರದೇಶದಲ್ಲಿ ಅಧಿಸೂಚಿತ ಅರಣ್ಯ, ಪಟ್ಟಾಭೂಮಿ, ಸರಕಾರಿ ಕಚೇರಿ, ಶಾಲೆ ಕಾಲೇಜುಗಳೂ ಇವೆ. ಹೀಗಾಗಿ ಇದರ ಪರಾಮರ್ಶೆ ಆಗಬೇಕು ಎಂಬ ಬೇಡಿಕೆಗಳಿವೆ. ಆದ್ದರಿಂದ ಸಮೀಕ್ಷೆ ನಡೆಸಿ ಸಮಗ್ರ ವರದಿ ಸಿದ್ಧಪಡಿಸಲಾಗುವುದು ಎಂದರು.

Also Read  ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ..? ಚಿಂತೆ ಬಿಡಿ.. ► ನ.17, 18 ರಂದು ಮತದಾರರ ಮಿಂಚಿನ ನೋಂದಣಿ ಅಭಿಯಾನ

error: Content is protected !!
Scroll to Top