ಕಾರ್ಮಿಕರ ಕಾನೂನು ಅರಿವು- ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಅ. 25. ಕಾರ್ಮಿಕ ಇಲಾಖೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐ.ಇ.ಸಿ ಚಟುವಟಿಕೆಗಳಡಿ ಸಂಘಟಿತ ಮತ್ತು ಅಸಂಘಟಿತ ವರ್ಗದ ಎಲ್ಲಾ ಕಾರ್ಮಿಕರಿಗೆ, ಕಾರ್ಮಿಕ ಸಂಘಟನೆಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಹಾಗೂ ಆಡಳಿತ ವರ್ಗದವರಿಗೆ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಕಾನೂನುಗಳ ಬಗ್ಗೆ ಮತ್ತು ಜಾರಿಗೊಳಿಸುತ್ತಿರುವ ವಿವಿಧ ಯೋಜನೆಗಳ ಬಗ್ಗೆ ಕಾನೂನು ಅರಿವು ಕಾರ್ಯಾಗಾರವನ್ನು ನವೆಂಬರ್ 4ರಂದು ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top