ಟ್ರಾಫಿಕ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿ..! ಬಂಟ್ವಾಳ ಮೂಲದ ಚಾಲಕನ ಬಂಧನ

crime, arrest, suspected

(ನ್ಯೂಸ್ ಕಡಬ) newskadaba.com ಅ.26. ಕರ್ತವ್ಯನಿರತ ಸಂಚಾರಿ ಪೊಲೀಸರ ಸೂಚನೆಯನ್ನು ನಿರ್ಲಕ್ಷಿಸಿ ಕಾರು ಚಲಾಯಿಸಿ, ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಕೊಡಗು ಪೊಲೀಸರು ಬಂಟ್ವಾಳ ಮೂಲದ ಚಾಲಕನನ್ನು ಬಂಧಿಸಿದ್ದಾರೆ.

ಬಂಧಿತನನ್ನು ಬಂಟ್ವಾಳ ತಾಲ್ಲೂಕಿನ ಮುನ್ನೂರು ಗ್ರಾಮದ ನಂದವಾರಕೋಟೆ ನಿವಾಸಿ ನಝೀರ್‌ (27) ಎಂದು ಗುರುತಿಸಲಾಗಿದೆ. ಘಟನೆಯ ಸಂದರ್ಭ ಆತ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಮಡಿಕೇರಿಯ ಜನರಲ್‌ ತಿಮ್ಮಯ್ಯ ವೃತ್ತದ ಬಳಿ ಅ.20 ರಂದು ಎರಡು ವಾಹನಗಳ ನಡುವೆ ಢಿಕ್ಕಿಯಾಗಿದ್ದರಿಂದ ವಾಹನ ದಟ್ಟಣೆ ಉಂಟಾಗಿತ್ತು. ಈ ಸಂದರ್ಭದಲ್ಲಿ ಅಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್‌ ಸಿಬ್ಬಂದಿಯಾದ ಸಂಜು ಅವರು ಚಾಲಕ ನಝೀರ್‌ ನನ್ನು ಪಕ್ಕಕ್ಕೆ ನಿಲ್ಲಿಸಲು ಸೂಚಿಸಿದ್ದಾರೆ. ಆದರೆ ಇದನ್ನು ನಿರ್ಲಕ್ಷ್ಯ ಮಾಡಿದ ನಝೀರ್‌ ಕಾರು ಚಲಾಯಿಸಿ ಪರಾರಿಯಾಗಿದ್ದಾನೆ. ಮಡಿಕೇರಿ ಪೊಲೀಸರು ಹಾಗೂ ಸಿಬ್ಬಂದಿಗಳ ತನಿಖಾ ತಂಡ ಆರೋಪಿಯನ್ನು ಬಂಧಿಸಿದ್ದಾರೆ.

error: Content is protected !!
Scroll to Top