ದೇವರಿಗೆ ಇಟ್ಟ ದೀಪದಿಂದಾಗಿ ಪೈಂಟ್‌ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com .ಉಡುಪಿ, ಮಾ.20. ದೇವರಿಗೆ ಇಟ್ಟ ದೀಪ ಮಗುಚಿ ಬಿದ್ದ ಪರಿಣಾಮ ಪೈಂಟ್‌ ಅಂಗಡಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಉಡುಪಿಯಲ್ಲಿ ಮಂಗಳವಾರದಂದು ನಡೆದಿದೆ.

ಉಡುಪಿಯ ಈಶ್ವರನಗರದ ನಾಲ್ಕು ಮಹಡಿಯ ಕಟ್ಟಡವೊಂದರಲ್ಲಿ ಈ ಅಗ್ನಿ ಅವಘಡ ಸಂಭವಿದ್ದರಂದಾಗಿ ಲಕ್ಷಾಂತರ ರುಪಾಯಿಯ ನಷ್ಟ ಸಂಭವಿದೆ . ಪೈಂಟ್‌ ಅಂಗಡಿಯಲ್ಲಿ ದೇವರಿಗೆ ಇಟ್ಟ ದೀಪ ಬಿದ್ದು ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಅಪಾರ ಪ್ರಮಾಣದ ಪೈಂಟ್‌ ಡಬ್ಬಗಳು ಸುಟ್ಟು ಹೋಗಿವೆ. ಕಟ್ಟಡ ಪೂರ್ತಿ ದಟ್ಟ ಹೊಗೆ ಆವರಿಸಿದ್ದರಿಂದಾಗಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

Also Read  ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಏರಿಕೆ..!           ನಿಯಂತ್ರಣಕ್ಕೆ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

error: Content is protected !!
Scroll to Top