ಪರಿಶಿಷ್ಟ ಜಾತಿಗೆ ಒಳಮೀಸಲಾತಿ ನೀಡಿಕೆ ತೀರ್ಮಾನ-ಸಚಿವ ಸಂಪುಟ

(ನ್ಯೂಸ್ ಕಡಬ)newskadaba.com,.28,ನವದೆಹಲಿ: ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ತೀರ್ಮಾನಿಸಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಒಳ ಮೀಸಲಾತಿ ಕಲ್ಪಿಸಲು ನಿರ್ಣಯಿಸಲಾಗಿದ್ದು, ನಿವೃತ್ತ ಹೈ ಕೋರ್ಟ್​ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದೆ. ಅಲ್ಲದೇ ಮೂರು ತಿಂಗಳಲ್ಲಿ ವರದಿ ಸಲ್ಲಿಕೆ ಮಾಡಲು ಆಯೋಗಕ್ಕೆ ಸೂಚನೆ ನೀಡಲಾಗಿದೆ.

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ನೀಡಲು ಸುಪ್ರಿಂಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಚರ್ಚೆ‌ ನಡೆದಿದ್ದು, ಒಳ ಮೀಸಲಾತಿ ಕಲ್ಪಿಸಲು ಕ್ಯಾಬಿನೆಟ್ ನಿರ್ಣಯ ಮಾಡಿದೆ. ನಿವೃತ್ತ ಹೈ ಕೋರ್ಟ್, ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

Also Read  ಸಿನಿಮಾ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ತಾಂಡವ್ ರಾಮ್ ಅರೆಸ್ಟ್

error: Content is protected !!
Scroll to Top