5 ತಿಂಗಳ ಬಳಿಕ ಜೈಲಿಂದ ದರ್ಶನ್ ರಿಲೀಸ್ – ಹೈಕೋರ್ಟ್‌ನಿಂದ ಜಾಮೀನು ಮಂಜೂರು

(ನ್ಯೂಸ್ ಕಡಬ)newskadaba.com ಬೆಂಗಳೂರು, . 30. ದೀಪಾವಳಿ ಹಬ್ಬಕ್ಕೆ ದರ್ಶನ್‌ಗೆ ಬಿಗ್‌ ಗಿಫ್ಟ್‌ ಸಿಕ್ಕಿದ್ದು 140 ದಿನಗಳ ಬಳಿಕ ದರ್ಶನ್‌ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟ ದರ್ಶನ್‌ಗೆ ಹೈಕೋರ್ಟ್‌ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್‌ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

 

Scroll to Top