ವರ್ಗಾವಣೆ ವಿಚಾರದಲ್ಲಿ ಮೂಗು ತೂರಿಸಿದ ರಾಜ್ಯ ಸರ್ಕಾರಕ್ಕೆ ಮುಖಭಂಗ ► ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮಾ.21. ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಯವರ ವರ್ಗಾವಣೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದ್ದು,  ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಯಲಿದ್ದಾರೆ.

ಅವಧಿಗಿಂತಲು ಮೊದಲೇ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಮಾ.8 ರಂದು ರೋಹಿಣಿ ಸಿಂಧೂರಿ ಯವರು ಸಿಎಟಿ ಮೊರೆ ಹೋಗಿದ್ದರು. ಈ ಹಿನ್ನಲೆಯಲ್ಲಿ ಸಿಎಟಿಯು ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ  ನೀಡಿತ್ತು. ಮಾ.13ಕ್ಕೆ ನಡೆಯಬೇಕಿದ್ದ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿದ್ದು, ಇದರ ಬಗ್ಗೆ ವಿಚಾರಣೆಯು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ನಡೆದಿದೆ. ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಯುವಂತೆ ನ್ಯಾಯಮಂಡಳಿಯು ಆಜ್ಞೆ ನೀಡಿದೆ.

Also Read  ಉಪ್ಪಿನಂಗಡಿ: ಶೆಡ್ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವುಗೈದು ಪರಾರಿಯಾಗುತ್ತಿದ್ದ ವೇಳೆ ಲಾರಿಗೆ ಢಿಕ್ಕಿ ➤ ಸವಾರ ಗಂಭೀರ..!

error: Content is protected !!
Scroll to Top