ಪೊಲೀಸ್ ಕಾನ್ ಸ್ಟೇಬಲ್ ನ ಬರ್ಬರ ಕೊಲೆ..!

Crime

(ನ್ಯೂಸ್ ಕಡಬ) newskadaba.com ಹಾಸನ, ನ. 05. ಕಾನ್ ಸ್ಟೇಬಲ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್ನಲ್ಲಿ ರವಿವಾರ ರಾತ್ರಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಬಾಗೇಶಪುರ ಗ್ರಾಮದ ಪೊಲೀಸ್ ಕಾನ್ ಸ್ಟೇಬಲ್ ಹರೀಶ್ ವಿ.(32) ಎಂದು ಗುರುತಿಸಲಾಗಿದೆ. ಇವರು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿದ್ದರು. ಹರೀಶ್ ಅವರ ವಿವಾಹವು ನ.11ರಂದು ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ವಿವಾಹ ಆಮಂತ್ರಣ ಪತ್ರಿಕೆಗಳನ್ನು ಸಂಬಂಧಿಕರಿಗೆ ಹಂಚಿ ಕಳೆದ ರಾತ್ರಿ ಮನೆಗೆ ಬೈಕಿನಲ್ಲಿ ಹಿಂದಿರುಗುತ್ತಿದ್ದ ಈ ಕೃತ್ಯೆ ಎಸೆಯಲಾಗಿದೆ. ದುಷ್ಕರ್ಮಿಗಳು ಅವರ ಬೈಕಿನ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  ಮಂಗಳೂರು: ಒಂದು ಕಾರಿಗೆ 200ರೂ. ಟೋಲ್ ಕಟ್ ➤ ಚಾಲಕನಿಗೆ‌ ಶಾಕ್

 

 

error: Content is protected !!
Scroll to Top