ಕಾರು- ಪಿಕಪ್ ಡಿಕ್ಕಿ- ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಕಲಬುರಗಿ, . 06. ಮಹಿಂದ್ರಾ ಪಿಕಪ್ ಹಾಗೂ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ.

ಮೃತರನ್ನು ರಟಕಲ್ ಗ್ರಾಮ ಕಲಬುರಗಿಯ ಜನತಾ ಲೇಔಟ್ ನಿವಾಸಿ ಮುರಗೇಶ್ ಚಂದ್ರಶೇಖರ ಉಪ್ಪಿನ್ (42) ಹಾಗೂ ಶಹಾಬಾದ್ ನಿವಾಸಿ ಧೂಳಮ್ಮ ಯಮುನಪ್ಪ (60) ಎಂದು ಗುರುತಿಸಲಾಗಿದೆ. ಮರುಗೇಶ್ ಕಲಬುರಗಿಯ ಎಚ್‌ಡಿಎಫ್‌ಸಿ ಗೋಲ್ಡ್ ಬ್ಯಾಂಕ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಮಂಗಳವಾರ ಮಧ್ಯರಾತ್ರಿ ಕಾರಿನಲ್ಲಿ ಮುರುಗೇಶ್ ಹಾಗೂ ಇನ್ನೋರ್ವ ವ್ಯಕ್ತಿ ಕಲಬುರಗಿ ಕಡೆಗೆ ಹೊರಟಿದ್ದರು. ಈ ವೇಳೆ ಕಲಬುರಗಿ ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಪಿಕಪ್ ಜೀಪಿನಲ್ಲಿದ್ದ ಧೂಳಮ್ಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

Also Read  ರಾಜ್ಯದ ಐದು ಜಿಲ್ಲೆಗಳಲ್ಲಿ 'ವಿಮಾನ ನಿಲ್ದಾಣ' ನಿರ್ಮಾಣ ➤ ಸಚಿವ ಮುರುಗೇಶ್ ನಿರಾಣಿ…!

 

error: Content is protected !!
Scroll to Top