ಇಂದು ಪವಿತ್ರಾ ಗೌಡ ಸಹಿತ ನಾಲ್ವರ ಅರ್ಜಿ ವಿಚಾರಣೆ..!

(ನ್ಯೂಸ್ ಕಡಬ) newskadaba.com ನ. 07. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಜೈಲಿನಲ್ಲಿರುವ ನಾಲ್ವರು ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯು ಇಂದು ಹೈಕೋರ್ಟ್​​ನ ಏಕಸದಸ್ಯ ಪೀಠದ ಮುಂದೆ ನಡೆಯಲಿದೆ.


ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ಅನುಕುಮಾರ್​​ ಸೇರಿದಂತೆ ನಾಲ್ವರು ಕೊಲೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಮೊದಲ ಆರೋಪಿ ಪವಿತ್ರಾ ಗೌಡಳ ಜಾಮೀನು ಅರ್ಜಿಯನ್ನು ಸೆಷನ್ಸ್‌ ಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು. ನಂತರ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್​ಗೆ ಹೋಗಿದ್ದರು.

Also Read  ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ

ಪ್ರಕರಣದ ಎರಡನೇ ಆರೋಪಿ ನಟ ದರ್ಶನ್‌ಗೆ ಈಗಾಗಲೇ ಜಾಮೀನು ದೊರೆತಿದ್ದು, ಬೆನ್ನು ನೋವಿಗೆ ಸರ್ಜಿಕಲ್‌ ಚಿಕಿತ್ಸೆ ಅಗತ್ಯವಿರುವುದರಿಂದ ಜಾಮೀನು ನೀಡಬೇಕು ಎಂದು ದರ್ಶನ್‌ ವಕೀಲರು ವಾದಿಸಿದ್ದರು. ಹೀಗಾಗಿ, ಚಿಕಿತ್ಸೆಗಾಗಿ ಹೈಕೋರ್ಟ್‌ 6 ವಾರಗಳ ಮಧ್ಯಂತರ ಜಾಮೀನು ನೀಡಿತ್ತು.

error: Content is protected !!
Scroll to Top