ಪೋಷಕರಿಗೆ ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆಗೆ ಶರಣು..!



(ನ್ಯೂಸ್ ಕಡಬ) newskadaba.com ಬೀದರ್, ನ. 07. ಮ‌ದ್ಯದ ಅಮಲಿನಲ್ಲಿದ್ದ ಕಾರ್ಮಿಕನೊಬ್ಬ ಪಾಲಕರಿಗೆ ವಿಡಿಯೋ ಕಾಲ್ ಮಾಡಿ ಲೈವ್’ನಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ಸದಲಾಪೂರ ಗ್ರಾಮದಲ್ಲಿ ಜರುಗಿದೆ.







ಆತ್ಮಹತ್ಯೆಗೈದ ಯುವಕನನ್ನು ಮಹಾರಾಷ್ಟ್ರದ ನಿಲಂಗಾ ತಾಲೂಕಿನ ಡೋಬಲೆವಾಡಿ ಗ್ರಾಮದ‌ ನಿವಾಸಿ ಸಚಿನ ರಾಜಕುಮಾರ ಚವ್ಹಾಣ (32) ಎಂದು ಗುರುತಿಸಲಾಗಿದೆ. ಸುದ್ದಿ ತಿಳಿದ ಮುಡಬಿ ಠಾಣೆ ಪಿಎಸ್ಐ ಜಯಶ್ರೀ ಹೋಡಲ್ ನೇತೃತ್ವದ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಮುಡಬಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ






 

error: Content is protected !!
Scroll to Top