ಕೊಲೆ ಯತ್ನ ಪ್ರಕರಣ: 4 ಆರೋಪಿಗಳು ಅರೆಸ್ಟ್

crime, arrest, suspected


(ನ್ಯೂಸ್ ಕಡಬ) newskadaba.com ಮಂಗಳೂರು, . 12. ತಲಪಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಕೆಸಿ ರಸ್ತೆ-ಉಚ್ಚಿಲ ಮಾರ್ಗದ ಬಳಿ ನವೆಂಬರ್ 8ರಂದು ನಡೆದಿದ್ದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.







ಕೇರಳದ ಕಾಸರಗೋಡು ಜಿಲ್ಲೆಯ ಬಡಾಜೆ ಕಡಂಬಾರ್ ಶಾಲೆಯ ಬಳಿಯ ಫಾತಿಮಾ ಮಂಜಿಲ್ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಮೊಹಮ್ಮದ್ ಆಸಿಫ್ (33) ಮಂಗಳೂರಿನಿಂದ ಕೇರಳಕ್ಕೆ ಕುಟುಂಬ ಸಮೇತ ಮನೆಗೆ ತೆರಳುತ್ತಿದ್ದಾಗ ರಾತ್ರಿ 7:40 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಆತನನ್ನು ಕೊಲ್ಲುವ ಉದ್ದೇಶದಿಂದ ದಾಳಿಕೋರರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.






 

error: Content is protected !!
Scroll to Top