ರಾಜ್ಯಗಳಲ್ಲಿ ಎನ್ಐಎ ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, . 12. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ನ.11ರಂದು ಏಕಕಾಲಕ್ಕೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯಾಚರಣೆ ಮಾಡಿದ್ದಾರೆ.

ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದಾರೆ. ಅಲ್ ಖೈದಾ ಉಗ್ರ ಸಂಘಟನೆ ಕುರಿತು ಪ್ರಚಾರ, ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ಧನಸಹಾಯ ಮಾಡುವ ವ್ಯಕ್ತಿಗಳ ವಿರುದ್ದ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಆಸ್ಸಾಂನ 9 ಕಡೆ ಎನ್ಐಎ ದಾಳಿ ನಡೆಸಿದೆ. ಭಯೋತ್ಪಾದಕ ನಿಧಿ ಚಟುವಟಿಕೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.

 

Scroll to Top