ಮಂಗಳೂರಿನಲ್ಲಿ ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ನ. 13. ನಗರದ ಪಕ್ಷಿಕೆರೆ ಎಂಬಲ್ಲಿ ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಇಬ್ಬರು ಆರೋಪಿಗಳು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹತ್ಯೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೃತ ಕಾರ್ತಿಕ್ ತಾಯಿ ಶ್ಯಾಮಲಾ ಭಟ್ ಹಾಗೂ ಸಹೋದರಿ ಕಣ್ಮಣಿಯವರನ್ನು ಬಂಧಿಸಲಾಗಿದೆ.

ಬಂಧಿತ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲೇ ಇಬ್ಬರು ಆರೋಪಿಗಳು ತಲೆ‌ತಿರುಗಿ ಬಿದ್ದಿದ್ದು, ಈ ಹಿನ್ನಲೆ ಇಬ್ಬರನ್ನೂ ಮೂಡಬಿದ್ರೆಯ ಖಾಸಗಿ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಕೌಟುಂಬಿಕ ಕಲಹದ ಬಗ್ಗೆ ಡೆತ್ ನೋಟ್ ಬರೆದಿಟ್ಟಿರುವ ಕಾರ್ತಿಕ್ ಅದರಲ್ಲಿ ತಂದೆ, ತಾಯಿ, ಸಹೋದರಿ ವಿರುದ್ದ ಆರೋಪ ಮಾಡಿದ್ದರು.

Scroll to Top