ಮಂಗಳೂರು: ಬೊಂದೆಲ್ ಸಂತ ಲಾರೆನ್ಸರ ಚರ್ಚ್ ಗೆ ತ್ರಿವಳಿ ಸಂಭ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, . 13.  ಮಂಗಳೂರಿನಿಂದ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಹಾದಿಯಲ್ಲಿ ಮಂಗಳೂರಿನಿಂದ 8 ಕಿ.ಮೀ ದೂರದಲ್ಲಿ ಪ್ರಕೃತಿಯ ಮಡಿಲಲ್ಲಿ ಕಂಗೊಳಿಸುವ ಬೊಂದೆಲ್ ಎಂಬಲ್ಲಿ ರಸ್ತೆಯ ಬಲ ಪಾರ್ಶ್ವದಲ್ಲಿ ಇರುವ ಸಂತ ಲಾರೆನ್ಸರ ಸುಂದರ ದೇವಾಲಯ ಹಾಗೂ ಪುಣ್ಯಕ್ಷೇತ್ರ ಹಲವಾರು ಭಕ್ತಾಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಿದೆ. ಈಗಾಗಲೇ ನೂರು ಸಂವತ್ಸರಗಳನ್ನು ಪೂರೈಸಿದ ಈ ಚರ್ಚ್ ಹಾಗೂ ಪುಣ್ಯಕ್ಷೇತ್ರಕ್ಕೆ ಇದೀಗ ತ್ರಿವಳಿ ಸಂಭ್ರಮ.

ಈ ಬಗ್ಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಲಾಗಿದ್ದು, ಇದರಲ್ಲಿ ಪ್ರಧಾನ ಧರ್ಮಗುರುಗಳಾದ ವಂ| ಆ್ಯಂಡ್ರ‍್ಯೂ ಲಿಯೋ ಡಿ’ಸೋಜಾ, ಸಹಾಯಕ ಧರ್ಮಗುರುಗಳಾದ ವಂ| ವಿಲಿಯಂ ಡಿ’ಸೋಜಾ, ಸಂತ ಲಾರೆನ್ಸ್ ಶಾಲೆಯ ಪ್ರಾಂಶುಪಾಲರಾದ ವಂ| ಪೀಟರ್ ಗೊನ್ಸಾಲ್ವಿಸ್, ಉಪಾಧ್ಯಕ್ಷರಾದ ಜೊನ್ ಡಿ’ಸಿಲ್ವಾ, ಪುಣ್ಯಕ್ಷೇತ್ರ ಸಮಿತಿ ಸಂಯೋಜಕರಾದ ಪ್ರಕಾಶ್ ಪಿಂಟೊ, ಶತಮಾನೋತ್ಸವ ಸ್ಮರಣ ಸಂಚಿಕೆ ಸಂಪಾದಕರಾದ ಮೇರಿ ಮಿರಾಂದಾ, ಶತಮಾನೋತ್ಸವ ಸ್ಮರಣಾರ್ಥ ಕಾರ್ಯಕ್ರಮದ ಸಂಯೋಜಕರಾದ ಪ್ರೀತಿ ಡಿ’ಸೋಜಾ ಅವರು ಭಾಗವಹಿಸಿದ್ದರು. ಇನ್ನು ಕಾರ್ಯಕ್ರಮಕ್ಕೆ ಸರ್ವರನ್ನು ಆದರದಿಂದ ಸ್ವಾಗತಿಸಲಾಗಿದೆ.

Also Read  ಪೇಂಟಿಂಗ್ ಮಾಡುವ ವೇಳೆ 3ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು..!

 

error: Content is protected !!
Scroll to Top