ಪತ್ನಿ ಜೊತೆ ರಿಯಲ್‌ ಎಸ್ಟೇಟ್‌ ಉದ್ಯಮಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com . 14. ಪತ್ನಿ ಜೊತೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ನೇಣಿಗೆ ಶರಣಾದ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.

ಮೃತ ದಂಪತಿಯನ್ನು ಕೊಪ್ಪ ನಿವಾಸಿ ಜಯಣ್ಣ ಅವರ ಪುತ್ರ ಸುರೇಶ್ (40) ಹಾಗೂ ಅವರ ಪತ್ನಿ ಪಲ್ಲವಿ (28) ಎಂದು ಗುರುತಿಸಲಾಗಿದೆ.  ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹೊನ್ನೂರು ಕಾವಲ್‌ನಲ್ಲಿರುವ ಜಮೀನಿನ ಹಳೆಯ ಖಾಲಿ ಮನೆಯೊಂದರಲ್ಲಿ ದಂಪತಿ ನೇಣಿಗೆ ಶರಣಾಗಿದ್ದಾರೆ. ರಿಯಲ್ ಎಸ್ಟೇಟ್ ಮಾಫಿಯಾದ ಒತ್ತಡ, ಉದ್ಯಮದಲ್ಲಿ‌ ನಷ್ಟ, ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

 

Scroll to Top