3 ತಿಂಗಳ ಸಂಬಳ ಸಿಗದೆ ಹೋರಾಟಕ್ಕೆ ಮುಂದಾದ 108 ಅಂಬುಲೆನ್ಸ್‌ ಸಿಬ್ಬಂದಿ

(ನ್ಯೂಸ್ ಕಡಬ) newskadaba.com . 14. ಕರ್ನಾಟಕ ಸರ್ಕಾರದ ವಿರುದ್ಧ ಹೋರಾಟ ನಡೆಸಲು 108 ಅಂಬುಲೆನ್ಸ್‌ ಸಿಬ್ಬಂದಿ ಮುಂದಾಗಿದ್ದಾರೆ.

3 ತಿಂಗಳಿನಿಂದ ನಮಗೆ ಸಂಬಳ ಸಿಕ್ಕಿಲ್ಲ. ಹೀಗಾಗಿ ನ.16ರ ರಾತ್ರಿ 8 ಗಂಟೆಯ ಒಳಗಡೆ ಸಂಬಳವನ್ನು ಬಿಡುಗಡೆ ಮಾಡಬೇಕು. ಅಂದು ಸಂಬಳ ಪಾವತಿಯಾಗದೇ ಇದ್ದರೆ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ(108) ನೌಕರರ ಸಂಘ, ಅಖಿಲ ಕರ್ನಾಟಕ 108 ಅಂಬುಲೆನ್ಸ್‌ ನೌಕರರ ಹಿತರಕ್ಷಣಾ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಕವಚ(108) ಅಂಬುಲೆನ್ಸ್‌ ನೌಕರರರ ಸಂಘ ಎಚ್ಚರಿಕೆ ನೀಡಿದೆ.

Also Read  ಗೊಂದಲಗಳ ಮಧ್ಯೆ ಆರಂಭವಾದ ಉಸ್ತುವಾರಿ ಸಚಿವರ 'ಸಾಮರಸ್ಯ ನಡಿಗೆ' ► ಫರಂಗಿಪೇಟೆಯಲ್ಲಿ ಬಸ್‍ಗಳ ಮೇಲೆ ಕಲ್ಲು ತೂರಾಟ

 

 

error: Content is protected !!
Scroll to Top