ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, . 15. ಅಡಿಕೆ ಮರ ಹತ್ತಿ ಅಡಿಕೆ ಕೀಳುತ್ತಿದ್ದ ಕಾರ್ಮಿಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ಮೃತಪಟ್ಟ ಘಟನೆ ಪಾಣೆಮಂಗಳೂರಿನ ಬೋಳಂಗಡಿಯಲ್ಲಿ ನಡೆದಿದೆ.

ಮೃತಪಟ್ಟ ಕಾರ್ಮಿಕನನ್ನು ಬೋಳಂಗಡಿ ಮಜಲ್ ಮನೆ ನಿವಾಸಿ ಜೋನ್ ಲೋಬೊ(45) ಎಂದು ಗುರುತಿಸಲಾಗಿದೆ. ಅವರು ನ. 13ರಂದು ಬೋಳಂಗಡಿ ಪದ್ಮನಾಭ ಪ್ರಭು ಅವರ ತೋಟದಲ್ಲಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ಅಡಿಕೆ ಮರದಿಂದ ಬಿದ್ದಿದ್ದಾರೆ. ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಪತ್ನಿ ಸ್ವಪ್ನ ವಿ.ಎಂ. ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ತುರ್ತು ಭೂಸ್ಪರ್ಶದ ವೇಳೆ ಸ್ಕಿಡ್ ಆಗಿ ತುಂಡಾದ ವಿಮಾನ ➤ ಮೂವರು ಮೃತ್ಯು, 179 ಜನರಿಗೆ ಗಾಯ

 

error: Content is protected !!
Scroll to Top